ಒಟ್ಟು 2 ಕಡೆಗಳಲ್ಲಿ , 1 ಕವಿಗಳು , 2 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಎನಿತುಂ ಪೊಕ್ಕಿರ್ದಪಯ್ ನೀಂ ಪೊರಮಡು ಕೊಳದಿಂ ದ್ರೌಷದೀದ್ರೋಹದುಶ್ಯಾಸನದುಷ್ಟಜ್ಯೇಷ್ಠ ಭೀಷ್ಮಪ್ರಮುಖನಿಖಿಲಬಂಧುಕ್ಷಯೋತ್ಪನ್ನದುಃಖಧ್ವನಿವಾರಿಚ್ಛಿನ್ನಧೈರ್ಯದ್ರುಮ ಯಮಸುತ ನಿಷ್ಕರಣ ದ್ವೇಷಿ ಭೀಮ ಧ್ವನಿಯಂಕೇಳ್ದಿನ್ನುಮಿರ್ದಯ್ ಕುರುಕುಲವಿಲಯೋತ್ಪಾತನೋತ್ಪಾತಕೇತೂ॥೧೫॥
ಜಳದೊಳ್ ಮೀನಿರ್ಪವೊಲ್ ನೀಂ ಕೊಳದೊಳೆ ಮುಳುಗಿರ್ದಕಟಾ ಕೋಡಸೇಡಿಂಗೊಳಗಾದಯ್ ನಿನ್ನ ದುರ್ಯೋಧನವೆಸರ್ಗಿದು ಲಜ್ಜಾಕರಂ ತೋರಿದಯ್ ನಿನ್ನಳವಂ ಚಿಃ ಸತ್ತರೇಂ ಪುಟ್ಟರೆ ಪೊರಮಡು ನೀಂ ಕಯ್ದುಗೊಳ್ ಕೌರವೇಂದ್ರಾಚಳವಜ್ರಂ ಬಂದನೀಗಳ್ ಕುರುಕುಲಮಥನೋದ್ಭೀಕರಂ ಭೀಮಸೇನಂ॥೧೩॥